Published March 25, 2026 | Version v1
Journal article Open

ಬೆಂಗಳೂರು ನಗರದಲ್ಲಿ ನಗರ ತ್ಯಾಜ್ಯ ನಿರ್ವಹಣಾ ನೀತಿಗಳು ಮತ್ತು ನಾಗರಿಕರ ಭಾಗವಹಿಸುವಿಕೆ: ಒಂದು ವಿಶ್ಲೇಷಣೆ

Description

ವೇಗದ ನಗರೀಕರಣ ಮತ್ತು ಜನಸಂಖ್ಯೆಯ ಬೆಳವಣಿಗೆಯು ಭಾರತದ ಮಹಾನಗರಗಳಲ್ಲಿ ಘನತ್ಯಾಜ್ಯ ನಿರ್ವಹಣೆಯ ಸವಾಲನ್ನು ತೀವ್ರಗೊಳಿಸಿದೆ. ಭಾರತದ ‘ಸಿಲಿಕಾನ್ ವ್ಯಾಲಿ’ ಎಂದು ಕರೆಯಲ್ಪಡುವ ಬೆಂಗಳೂರು, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಈ ನಗರೀಕರಣದ ಜೊತೆಗೆ, ತ್ಯಾಜ್ಯ ನಿರ್ವಹಣೆಯು ಒಂದು ಗಂಭೀರ ಸವಾಲಾಗಿ ಪರಿಣಮಿಸಿದೆ. ಪ್ರತಿದಿನ ಗಣನೀಯ ಪ್ರಮಾಣದ ಘನತ್ಯಾಜ್ಯವನ್ನು ಉತ್ಪಾದಿಸುತ್ತಿದೆ, ಈ ಸಂಶೋಧನಾ ಲೇಖನವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಳವಡಿಸಿಕೊಂಡಿರುವ ತ್ಯಾಜ್ಯ ನಿರ್ವಹಣಾ ನೀತಿಗಳು ಮತ್ತು ಈ ಪ್ರಕ್ರಿಯೆಯಲ್ಲಿ ನಾಗರಿಕರ ಮತ್ತು ಸಮುದಾಯದ ಪಾಲ್ಗೊಳ್ಳುವಿಕೆಯ ಮಹತ್ವವನ್ನು ಪರಿಶೀಲಿಸುತ್ತದೆ. “ಕಸದ ನಗರ” ಎಂಬ ಹಣೆಪಟ್ಟಿಯನ್ನು ಕಳಚಲು ನ್ಯಾಯಾಲಯದ ಆದೇಶಗಳು, “2 ಬಿನ್ 1 ಬ್ಯಾಗ್” ನಂತಹ ನೀತಿಗಳು ಮತ್ತು ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳ ಪಾತ್ರವನ್ನು ಈ ಅಧ್ಯಯನವು ಎತ್ತಿ ತೋರಿಸುತ್ತದೆ. ವಿಕೇಂದ್ರೀಕೃತ ತ್ಯಾಜ್ಯ ನಿರ್ವಹಣೆಯಲ್ಲಿ ನಾಗರಿಕರ ಸಕ್ರಿಯ ಭಾಗವಹಿಸುವಿಕೆಯು ಯಶಸ್ಸಿನ ಕೀಲಿ ಎಂಬುದು ಈ ಅಧ್ಯಯನದ ಪ್ರಮುಖ ಕಂಡುಕೊಳ್ಳುವಿಕೆಯಾಗಿದೆ. ಈ ಅಧ್ಯಯನವು ಬೆಂಗಳೂರಿನ ತ್ಯಾಜ್ಯ ನಿರ್ವಹಣಾ ನೀತಿಗಳನ್ನು ಪರಿಶೀಲಿಸುತ್ತದೆ ಮತ್ತು ಅವುಗಳ ಅನುಷ್ಠಾನದಲ್ಲಿ ನಾಗರಿಕರ ಪಾತ್ರವನ್ನು ವಿಶ್ಲೇಷಿಸುತ್ತದೆ.

Files

25. ಬೆಂಗಳೂರು ನಗರದಲ್ಲಿ ನಗರ ತ್ಯಾಜ್ಯ ನಿರ್ವಹಣಾ ನೀತಿಗಳು ಮತ್ತು ನಾಗರಿಕರ ಭಾಗವಹಿಸುವಿಕೆ.pdf